Street Beat

ಇದೆಲ್ಲ ‘ಮರ್ಯಾದೆ ಪ್ರಶ್ನೆ’… ಅಂತಿದ್ದಾರೆ ಆಲ್‌ ಓಕೆ!

ಆಲ್ ಓಕೆ ಹೇಳಿದ ‘ಮರ್ಯಾದೆ ಪ್ರಶ್ನೆ’… ʼಸಕ್ಕತ್ ಸ್ಟುಡಿಯೋʼದ ಮತ್ತೊಂದು ಪ್ರಯತ್ನ

ಸ್ಯಾಂಡಲ್ವುಡ್ನಲ್ಲಿ ಇತ್ತೀಚೆಗೆ ಸಖತ್ ಸುದ್ದಿ ಆಗ್ತಿರೋದು ‘ಮರ್ಯಾದೆ ಪ್ರಶ್ನೆ’. ಹೌದು ‘ಸಕ್ಕತ್ ಸ್ಟುಡಿಯೋ’ ಮೂಲಕ ಆರ್. ಜೆ ಪ್ರದೀಪ್ ಅವರು ನಿರ್ಮಾಣ ಮಾಡುತ್ತಿರುವ ಮೊದಲ ಸಿನಿಮಾದ ಹೆಸರೇ ʼಮರ್ಯಾದೆ ಪ್ರಶ್ನೆʼ . ಸಕ್ಕತ್ ಕಂಟೆಂಟ್ ಗಳ ಮೂಲಕವೇ ಪ್ರೇಕ್ಷಕರ ಗಮನಸೆಳೆಯುತ್ತಿರುವ ʼಸಕ್ಕತ್ ಸ್ಟುಡಿಯೋʼ ನಮ್ಮ ಚಿತ್ರರಂಗದ ಸೆಲಿಬ್ರಿಟಿಸ್ ಅವರವರ ಜೀವನದ ʼಮರ್ಯಾದೆ ಪ್ರಶ್ನೆʼ ಬಗ್ಗೆ ಪೋಸ್ಟ್ ಮಾಡುವ ಮೂಲಕ ಶೀರ್ಷಿಕೆ ಬಿಡುಗಡೆ ಮಾಡಿದ್ದರು.

ಆರ್. ಜೆ ಪ್ರದೀಪ್ ಪ್ರದೀಪ್ ಒಡೆತನದ ʼಸಕ್ಕತ್ ಸ್ಟುಡಿಯೋʼ ಬಹಳ ಕ್ರಿಯೇಟಿವ್ ಆಗಿ ಮರ್ಯಾದೆ ಪ್ರಶ್ನೆ ಸಿನಿಮಾವನ್ನು ಪ್ರಮೋಷನ್ ಮಾಡ್ತಿದೆ. RCB ಕಪ್ ಗೆಲ್ಬೇಕು ಅಂತಾ ಕೊಹ್ಲಿ ತಂಡಕ್ಕೆ ಚಿಯರ್ ಹೇಳುವ ಹಾಡು ನಿರ್ಮಿಸಿದ್ದ ʼಸಕ್ಕತ್ ಸ್ಟುಡಿಯೋʼ ಈಗ ಆಲ್ ಓಕೆ ಕಡೆಯಿಂದಲೂ ʼಮರ್ಯಾದೆ ಪ್ರಶ್ನೆʼಗಳಿಗೆ ಉತ್ತರ ಕೊಟ್ಟಿದೆ. ಕನ್ನಡದ ಖ್ಯಾತ ರ್ಯಾಪರ್ ಆಲ್ ಓಕೆ ಮಿಡ್ಡ್ಲ್ ಕ್ಲಾಸ್ ಮಂದಿಯ ಸಡಗರಗಳ ಬಗ್ಗೆ ಬಹಳ ಅರ್ಥಪೂರ್ಣವಾದ ಗೀತೆಯೊಂದನ್ನು ತಯಾರಿಸಿದ್ದು ʼಸಕ್ಕತ್ ಸ್ಟುಡಿಯೋʼ ಈ ಹಾಡನ್ನು ನಿರ್ಮಿಸಿದೆ.

ಈ ಹಾಡಿನ ಮೂಲಕ ಕನ್ನಡ ಚಿತ್ರರಂಗದ ಎಲ್ರಿಗೂ “ಒಗ್ಗಟ್ಟಾಗಿ ದುಡಿಯುವ ಬೆಳೆಯುವ ಹಾಗೂ ಸ್ಟಾರ್ ಸಿನಿಮಾಗಳ ಜೊತೆಗೆ ಹೊಸ ಪ್ರಯತ್ನಗಳಿಗೂ ಜನ ಜೈ ಎನ್ನಬೇಕು. ಇದು ಬರೀ ಮರ್ಯಾದೆ ಪ್ರಶ್ನೆ ಅಲ್ಲಾ ನಮ್ಮೆಲ್ಲರ ಉಳಿವಿನ ಪ್ರಶ್ನೆ ” ಎಂಬ ಗಟ್ಟಿ ಕೂಗೊಂದನ್ನು ನೀಡಿದ್ದಾರೆ.

ʼಮರ್ಯಾದೆ ಪ್ರಶ್ನೆʼ, ನಿರ್ಮಾಣದ ಜೊತೆಗೆ ಪ್ರದೀಪ್ ಕತೆ ಬರೆದಿದ್ದಾರೆ. ಕ್ರಿಯೆಟಿವ್ ಹೆಡ್ ಕೂಡ ಆಗಿದ್ದಾರೆ. ಈ ಮೂಲಕ ಕನ್ನಡಕ್ಕೆ ಹೊಸದೊಂದು ಕಥೆ ಕೊಡೊಕೆ ರೆಡಿ ಆಗಿದ್ದಾರೆ. ʼಮರ್ಯಾದೆ ಪ್ರಶ್ನೆʼ ಚಿತ್ರವನ್ನ ನಾಗರಾಜ್ ಸೋಮಯಾಜಿ ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ಇವರು ʼದಿ ಬೆಸ್ಟ್ ಆ್ಯಕ್ಟರ್ʼ, ʼಮೈಕ್ರೋ ಮೂವಿʼ ಮಾಡಿದ್ದರು. ʼಮರ್ಯಾದೆ ಪ್ರಶ್ನೆʼ ಚಿತ್ರಕ್ಕೆ ಸಂದೀಪ್ ವೆಲ್ಲುರಿ ಕ್ಯಾಮರಾವರ್ಕ್ ಮಾಡಿದ್ದಾರೆ. ಅರ್ಜುನ್ ರಾಮು ಸಂಗೀತ ಕೊಟ್ಟಿದ್ದಾರೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ಯಾರೆಲ್ಲ ಇದ್ದಾರೆ ಅನ್ನೋ ಕುತೂಹಲ ಇದೆ. ಕನ್ನಡದ ಅದ್ಭುತ ಕಲಾವಿದರ ದಂಡೇ ಇದರಲ್ಲಿದೆ ಎಂಬ ಮಾಹಿತಿಯಿದೆ . ಅತಿ ಶೀಘ್ರದಲ್ಲೇ ಆ ವಿವರಗಳನ್ನು ಜನರಿಗೆ ನೀಡುವ ತಯಾರಿಯಲ್ಲಿದ್ದಾರೆ . ಸದ್ಯಕ್ ಜೀವನದಲ್ಲಿ ಅಲ್ ಓಕೆ … ʼಮರ್ಯಾದೆ ಪ್ರಶ್ನೆʼ ಹಾಡನ್ನು ಸೋಶಿಯಲ್‌ ಮೀಡಿಯಾದಲ್ಲಿ ಎಲ್ಲರ ಗಮನ ಸೆಳೆಯುತ್ತಿದ್ದು, ಕೇಳುಗರು ಎಂಜಾಯ್ ಮಾಡುತ್ತಿದ್ದಾರೆ.

G S Karthik Sudhan

Karthik Sudhan is a name that is familiar in journalistic circles and has rendered valuable service for many significant years. Known for his vast knowledge and work in the field of cinema, crime, investigation and politics, Karthik Sudhan has worked in reputed online publications of Kannada.

Related Posts

error: Content is protected !!