Quick ಸುದ್ದಿಗೆ ಒಂದು click

‘ಸ್ಪಾರ್ಕ್‌’ ಪೋಸ್ಟರ್‌ ವಿವಾದಕ್ಕೆ ತೆರೆ… ಕ್ಷಮೆ ಕೇಳಿದ ನಿರ್ದೇಶಕ!

ಪೋಸ್ಟರ್‌ ವಿವಾದ; ರಮೇಶ್‌ ಇಂದಿರಾ ಬಳಿ ಕ್ಷಮೆ ಕೇಳಿದ ‘ಸ್ಪಾರ್ಕ್‌’ ನಿರ್ದೇಶಕ!

‘ಸ್ಪಾರ್ಕ್‌’ ಸಿನಿಮಾ ಪೋಸ್ಟರ್‌ ವಿವಾದಕ್ಕೆ ತೆರೆಬಿದ್ದಿದೆ. ‘ನೆನಪಿರಲಿ’ ಪ್ರೇಮ್‌ ಹುಟ್ಟುಹಬ್ಬಕ್ಕೆ ‘ಸ್ಪಾರ್ಕ್‌’ ಚಿತ್ರ ತಂಡದಿಂದ ಪೋಸ್ಟರ್‌ ವೊಂದನ್ನು ಬಿಡುಗಡೆ ಮಾಡಲಾಗಿತ್ತು. ಈ ಚಿತ್ರದಲ್ಲಿ ನಿರಂಜನ್‌ ಸುಧೀಂದ್ರ ನಾಯಕನಾಗಿ ನಟಿಸುತ್ತಿದ್ದು, ಪ್ರೇಮ್‌ ವಿಶೇಷ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಪೋಸ್ಟರ್‌ ವಿರುದ್ಧ ನಟಿ, ನಿರ್ಮಾಪಕಿ ಶೃತಿ ನಾಯ್ಡು ಅವರು ಕಾನೂನು ಹೋರಾಟ ಮಾಡುವುದಾಗಿ ಹೇಳಿದ್ದರು. ಆ ವಿವಾದವೀಗ ತಣ್ಣಗಾಗಿದ್ದು, ಚಿತ್ರದ ನಿರ್ದೇಶಕರು ರಮೇಶ್‌ ಇಂದಿರಾ ಬಳಿ ಕ್ಷಮೆಯಾಚಿಸಿದ್ದಾರೆ.

‘ಸ್ಪಾರ್ಕ್‌’ ಸಿನಿಮಾಗೆ ಯುವ ನಿರ್ದೇಶಕ ಮಹಾಂತೇಶ್ ಹಂದ್ರಾಳ್ ಆಕ್ಷನ್‌-ಕಟ್‌ ಹೇಳಿದ್ದಾರೆ. ನಿರ್ದೇಶಕರಾಗಿ ಇದು ಇವರಿಗೆ ಮೊದಲ ಅನುಭವ. ಹೀಗಾಗಿ ಸಣ್ಣದೊಂದು ತಪ್ಪು ನಡೆದು ಹೋಗಿದೆ. ಆ ತಪ್ಪನ್ನು ಈಗ ತಿದ್ದಿಕೊಂಡಿದ್ದಾರೆ. ‘ರಮೇಶ್‌ ಇಂದಿರಾ ಅವರ ಬಳಿ ಕ್ಷಮೆ ಕೇಳಿದ್ದು, ನಿಮ್ಮಿಂದ ಪರ್ಮಿಷನ್‌ ತೆಗೆದುಕೊಂಡು ಮಾಡಬೇಕಿತ್ತು. ಮ್ಯಾನೇಜರ್‌ ಹೇಳಿದ್ದಾರೆಂದು ಫೋಟೋ ಬಳಸಲಾಗಿದೆ. ಆದರೆ ಅದು ಮಿಸ್‌ ಕಮ್ಯೂನಿಕೇಷನ್‌ ಆಗಿದೆ ಕ್ಷಮಿಸಿ’ ಎಂದು ಕೇಳಿಕೊಂಡಿದ್ದಾರೆ. ‘ಹೊಸ ನಿರ್ದೇಶಕರಿಗೆ ಒಳ್ಳೆದಾಗಲಿ. ತೊಂದರೆ ಇಲ್ಲ ಮಾಡಿ. ಮೊದಲು ನೀವು ಒಮ್ಮೆ ತಿಳಿಸಬೇಕಿತ್ತು. ಆದರೆ ಅದು ನಡೆದು ಹೋಗಿದೆ. ಮುಂದೆ ಈ ರೀತಿ ತಪ್ಪು ಆಗದಂತೆ ನೋಡಿಕೊಳ್ಳಿ’ ಎಂದು ರಮೇಶ್‌ ಇಂದಿರಾ ಹೇಳಿದ್ದಾರೆ.

ಏನಿದು ವಿವಾದ?

ಪ್ರೇಮ್‌ ಹುಟ್ಟುಹಬ್ಬಕ್ಕೆ ಬಿಡುಗಡೆಯಾದ ಪೋಸ್ಟರ್‌ ನಲ್ಲಿ, ಒಬ್ಬ ರಾಜಕಾರಣಿಯ ಚಿತ್ರವನ್ನು ಹಿಡಿದುಕೊಂಡು ಅದಕ್ಕೆ ಸಿಗಾರಿನಿಂದ ಬೆಂಕಿ ನೀಡುವ ಚಿತ್ರವಿತ್ತು. ಆ ರಾಜಕಾರಣಿಯ ಖ್ಯಾತ ಕಲಾವಿದ ಕಂ ನಿರ್ದೇಶಕ ರಮೇಶ್ ಇಂದಿರಾ ಅವರದ್ದು. ಪೋಸ್ಟರ್‌ ರಮೇಶ್ ಇಂದಿರಾ ಅವರ ಚಿತ್ರ ‘ಭೀಮಾ’ ಸಿನಿಮಾದ್ದಾಗಿತ್ತು. ಹೀಗಾಗಿ ಪೋಸ್ಟರ್ ನೋಡಿದ ನಟಿ, ನಿರ್ಮಾಪಕಿ ಶ್ರುತಿ ನಾಯ್ಡು ಚಿತ್ರತಂಡ ಹಾಗೂ ಪ್ರೇಮ್‌ ವಿರುದ್ಧ ಬೇಸರ ವ್ಯಕ್ತಪಡಿಸಿದ್ದರು. ಚಿತ್ರತಂಡದ ವಿರುದ್ಧ ಕಾನೂನು ಹೋರಾಟದ ಎಚ್ಚರಿಕೆ ನೀಡಿದ್ದರು. ಅನುಮತಿ ಪಡೆಯದೇ ರಮೇಶ್‌ ಇಂದಿರಾ ಪರವಾಗಿ ಕಾನೂನು ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದರು. ಇದೀಗ ಈ ವಿವಾದವು ತಿಳಿಕೊಂಡಿದೆ.

‘ಸ್ಪಾರ್ಕ್‌’ ಸಿನಿಮಾದಲ್ಲಿ ಉಪೇಂದ್ರ ಅಣ್ಣನ ಮಗ ನಿರಂಜನ್‌ ಸುಧೀಂದ್ರ ಪತ್ರಕರ್ತನ ರೋಲ್‌ ಪ್ಲೇ ಮಾಡುತ್ತಿದ್ದು, ರಚನಾ ಇಂದರ್‌ ನಾಯಕಿಯಾಗಿ ಸಾಥ್‌ ಕೊಡುತ್ತಿದ್ದಾರೆ. ಆಕ್ಷನ್-ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರ ಡಾ. ಗರಿಮಾ ಅವಿನಾಶ್ ವಸಿಷ್ಠ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಅಶ್ವಿನ್ ಕೆನಡಿ ಛಾಯಾಗ್ರಹಣ, ಸಚಿನ್ ಬಸ್ರೂರ್ ಸಂಗೀತ‌ ನಿರ್ದೇಶನ, ಮಧು ಸಂಕಲನ ಈ ಚಿತ್ರಕ್ಕಿದೆ. ಸದ್ಯ ‘ಸ್ಪಾರ್ಕ್‌’ ಶೂಟಿಂಗ್‌ ಭರದಿಂದ ಸಾಗುತ್ತಿದೆ.

Related Posts

error: Content is protected !!